Tuesday 30 October 2012

ರಾಮಾಚಾರಿ


ನಮ್ಮೂರ ಯುವರಾಣಿ ಕಲ್ಯಾಣವಂತೆ ವರನ್ಯಾರು ಗೊತ್ತೇನೆ ಓ ಕೋಗಿಲೆ
ಶುಭಕೋರಿ ಹಾಡೋಣ ಬಾ ಕೋಗಿಲೆ
ಮಾಂಗಲ್ಯದಿಂದ ನಂಟಾದರು ಮನ ಸೇರೋ ಮದುವೇನೆ ಸುಖವೆಂದರು

ನಮ್ಮೂರ ಯುವರಾಣಿ ಕಲ್ಯಾಣವಂತೆ ವರನ್ಯಾರು ಗೊತ್ತೇನೆ ಓ ಕೋಗಿಲೆ
ಶುಭಕೋರಿ ಹಾಡೋಣ ಬಾ ಕೋಗಿಲೆ
ಮಾಂಗಲ್ಯದಿಂದ ನಂಟಾದರು ಮನ ಸೇರೋ ಮದುವೇನೆ ಸುಖವೆಂದರು

ಒಳ್ಳೆ ದಿನ ಘಳಿಗೆಯ ಕೂಡಿಸಿ ತೆಂಗು ಬಾಳೆ ಚಪ್ಪರವ ಹಾಕಿಸಿ
ನೂರಾರು ಮನೆಗೋಗಿ ಶುಭಕಾರ್ಯಕೆ ಕೂಗಿ ಕರೆದಾಗಲೆ ಮದುವೆಯೆ

ಸರಿಗಮ ಪಧನಿಸ ಊದಿಸಿ ತರತರ ಅಡಿಗೆಯ ಮಾಡಿಸಿ
ಮಾಂಗಲ್ಯ ಬಿಗಿದಾಗ ಗಟ್ಟಿಮೇಳ ಬಡಿದಾಗ ಅಕ್ಷತೆಯಲ್ಲೆ ಮದುವೆಯೆ

ನಿಜವಾಗಿ ನನಗೇನು ತೋಚದೆ ಹೇಳಮ್ಮ ನೀನೆಂದು ಕೇಳಿದೆ
ಮನಸೊಂದೆ ಸಾಕಂತೆ ಸಾಕ್ಷಿಗೆ ಅರಿಶಿಣವೆ ಬೇಕಂತೆ ತಾಳಿಗೆ

ಹೇಳಿದ್ದು ಸತ್ಯ ಕೇಳಿದ್ದು ಸತ್ಯ ಸುಳ್ಯಾವುದೆ ಕೋಗಿಲೆ
ಮಾಂಗಲ್ಯದಿಂದ ನಂಟಾದರು ಮನ ಸೆರೊ ಮದುವೇನೆ ಸುಖವೆಂದರು

ನಮ್ಮೂರ ಯುವರಾಣಿ ಕಲ್ಯಾಣವಂತೆ ವರನ್ಯಾರು ಗೊತ್ತೇನೆ ಓ ಕೋಗಿಲೆ
ಶುಭಕೋರಿ ಹಾಡೋಣ ಬಾ ಕೋಗಿಲೆ
ಮಾಂಗಲ್ಯದಿಂದ ನಂಟಾದರು ಮನ ಸೇರೋ ಮದುವೇನೆ ಸುಖವೆಂದರು

ನನ್ನನೊಂದು ಬೊಂಬೆಯೆಂದು ಮಾಡಿದ ಸರಿ ತಪ್ಪು ಕಲಿಸದೆ ದೂಡಿದ
ಸಿರಿಯಾಳೊ ಮನೆಯಲ್ಲಿ ಮನೆಯಾಳು ನಾನಿಲ್ಲಿ ನನ್ನ ಹಾಡಿಗೆ ಬೆಲೆಯೆ

ಹಣೆಯಲಿ ಬಡತನ ಗೀಚಿದ ಬುದ್ಧಿ ಮೇಲೆ ಕಪ್ಪು ಮಸಿ ರಾಚಿದ
ಎಲೆ ಹಾಕಿ ತೆಗೆಯೋನು ಹಸು ಎಮ್ಮೆ ಮೇಯ್ಸೋನು ಸೋಪಾನಕೆ ಸರಿಯೆ

ಇರುಳಲ್ಲಿ ಬರಿ ಭಾವಿ ನೋಡಿದೆ ಹಗಲಲ್ಲಿ ಹಾರೆಂದರೆ ಹಾರಿದೆ
ಆ ರಾತ್ರಿ ಗಂಟೆಂದರೆ ಹಾಕಿದೆ ಈ ರಾತ್ರಿ ಹಾಡೆಂದರೆ ಹಾಡಿದೆ

ಕೈ ಗೊಂಬೆ ನಾನು ಕುಣಿಸೋನು ನೀನು ನಾ ಯಾರಿಗೆ ಹೇಳಲೆ
ಮಾಂಗಲ್ಯದಿಂದ ನಂಟಾದರು ಮನ ಸೇರೊ ಮದುವೇನೆ ಸುಖವೆಂದರು

ನಮ್ಮೂರ ಯುವರಾಣಿ ಕಲ್ಯಾಣವಂತೆ ವರನ್ಯಾರು ಗೊತ್ತೇನೆ ಓ ಕೋಗಿಲೆ
ಶುಭಕೋರಿ ಹಾಡೋಣ ಬಾ ಕೋಗಿಲೆ
ಮಾಂಗಲ್ಯದಿಂದ ನಂಟಾದರು ಮನ ಸೇರೋ ಮದುವೇನೆ ಸುಖವೆಂದರು

Tuesday 9 October 2012

ಅದ್ದೂರಿ


ಮುಸ್ಸಂಜೆ ವೇಳೆಲಿ, ಮುತ್ತಿಟ್ಟ ಉಸಿರಾಣೆ ಬಿಟ್ಟು ಹೋಗೋ ದಾರಿಯಲ್ಲಿ ಖುಷಿಯೇ ಇಲ್ಲ....
ಒಟ್ಟಾದ ಹೆಜ್ಜೆನಾ ಕಿತ್ತಿಟ್ಟು ಹೊರೋಡೋಕೆ ಜೊತೆಗಿದ್ದ ನೆರಳಿಗೂ ಯಾಕೋ ಇಷ್ಟ ಇಲ್ಲ... 

ಒಲವಿಲ್ಲದ ಒಡಲೆಲ್ಲಿದೆ, ತಾಯಿಲ್ಲದ ಮಡಿಲೆಲ್ಲಿದೆ.
ಕಣ್ಣಿರಿಗೂ ಒಂದು ಕೊನೆಯ ಆಸೆ ಇದೆ...
ಕಣ್ಣಿಲ್ಲದ ಪ್ರೀತಿ ಕೇಳದೆ ಸಾಯುತ್ತಿದೆ....


ಮುಸ್ಸಂಜೆ ವೇಳೆಲಿ ಮುತ್ತಿಟ್ಟ ಉಸಿರಾಣೆ ಬಿಟ್ಟು ಹೋಗೋ ದಾರಿಯಲ್ಲಿ ಖುಷಿಯೇ ಇಲ್ಲ....
ಒಟ್ಟಾದ ಹೆಜ್ಜೆನಾ ಕಿತ್ತಿಟ್ಟು ಹೊರೋಡೋಕೆ ಜೊತೆಗಿದ್ದ ನೆರಳಿಗೂ ಯಾಕೋ ಇಷ್ಟ ಇಲ್ಲ... 


ನಿನ್ನಾಣೆಗೂ ಗೊತ್ತಿಲ್ಲ ಈ ಒಂಟಿಯ ಹೊಸ ಆಟ,
ಕಳೆದು ಹೋಗೋ ಮುನ್ನ ಕೈ ಸೇರಬಾರದೆ...
ಮಾತಿಲ್ಲದೆ ಕುಂತಿದ್ದ ಆ ಮೌನದ ಮನವಿಯ ಏನೆಂದು ನೀನೊಮ್ಮೆ ಕೇಳಬಾರದೆ...
ಹಳೆದಾದ ಹೊಸ ನೋವು ದಿನ ಕಳೆಯಲು ಗೊತ್ತಿಲ್ಲ, ಎದೆ ಗೂಡ ಗಡಿಯಾರ ನಿನ್ನಿಲ್ಲದೆ ನಡೆಯಲ್ಲ...
ಚೂರಗದ ಮನಸ್ಸೇಲ್ಲಿದೆ ಚೂರಾದರು ಮನ ಸೋಲಿದೆ
ಆ ಮುತ್ತಿಗೂ ಹಣೆಯ ಮುಟ್ಟಿದ ನೆನಪು ಇದೆ... ಹಣೆ ಮುಟ್ಟಿದ ತಪ್ಪಿಗೆ ಶಿಕ್ಷೆಯ ಬೇಡುತಿದೆ...


ಮುಸ್ಸಂಜೆ ವೇಳೆಲಿ ಮುತ್ತಿಟ್ಟ ಉಸಿರಾಣೆ ಬಿಟ್ಟು ಹೋಗೋ ದಾರಿಯಲ್ಲಿ ಖುಷಿಯೇ ಇಲ್ಲ....
ಒಟ್ಟಾದ ಹೆಜ್ಜೆನಾ ಕಿತ್ತಿಟ್ಟು ಹೊರೋಡೋಕೆ ಜೊತೆಗಿದ್ದ ನೆರಳಿಗೂ ಯಾಕೋ ಇಷ್ಟ ಇಲ್ಲ...


ಎದೆ ಮೇಲೆ ಮಾಡಿದ್ದ ಆ ಹಣೆಗೂ ಭಾಷೆಗೂ ಬಲವಿದ್ದರೆ ಒಲವನ್ನು ಕಾಯಬಾರದೆ...
ಉಸಿರೋಗೋ ಮುಂಚೆನೇ ಹೃದಯಕ್ಕೆ ತಾಯಾಗಿ ಬಡಿತಗಳ ಕೈ ತುತ್ತ ನೀಡಬಾರದೆ...
ಹೆಸರನ್ನು ಬರೆದಿಟ್ಟ ಗೋಡೆಗೂ ಉಸಿರಿಲ್ಲ..
ಮನಸ್ಸಾರೆ ಅಳಿಸೋಕೆ ಇದು ಗೊಂಬೆಯ ಕನಸಲ್ಲ.....
ದೂರಾದರೆ ನೋವಾಗದೇ.... ದೂರಾಗಲು ಭಯವಾಗಿದೆ.. ನಿನ್ನೊಟ್ಟಿಗೆ ಕಳೆದ ನೆನಪೇ ಕಾಡುತ್ತಿದೆ...
ನನ್ನ ಕನಸಿನ ಪೆಟ್ಟಿಗೆಗೆ ಬೀಗವು ಬೀಳುತ್ತಿದೆ...

ಮುಸ್ಸಂಜೆ ವೇಳೆಲಿ ಮುತ್ತಿಟ್ಟ ಉಸಿರಾಣೆ ಬಿಟ್ಟು ಹೋಗೋ ದಾರಿಯಲ್ಲಿ ಖುಷಿಯೇ ಇಲ್ಲ....
ಒಟ್ಟಾದ ಹೆಜ್ಜೆನಾ ಕಿತ್ತಿಟ್ಟು ಹೊರೋಡೋಕೆ ಜೊತೆಗಿದ್ದ ನೆರಳಿಗೂ ಯಾಕೋ ಇಷ್ಟ ಇಲ್ಲ...